ADVERTISEMENT

ರಾಮನಗರ: ಡಿ.ಕೆ. ಶಿವಕುಮಾರ್ ಅಜ್ಜಿ ನಿಂಗಮ್ಮ ನಿಧನ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 4:42 IST
Last Updated 17 ಡಿಸೆಂಬರ್ 2021, 4:42 IST
ನಿಂಗಮ್ಮ
ನಿಂಗಮ್ಮ   

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಅಜ್ಜಿ ನಿಂಗಮ್ಮ (106) ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು.

ಅವರ ಅಂತ್ಯಕ್ರಿಯೆ ಕನಕಪುರ ತಾಲ್ಲೂಕಿನ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಸಂಜೆ 4.30 ಕ್ಕೆ ನಡೆಯಲಿದೆ.

ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು ಮೊಟಕುಗೊಳಿಸಿ, ಬೆಳಗಾವಿಯಿಂದ 12 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ, ನಂತರ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿ, ಅಜ್ಜಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.