ಬೆಂಗಳೂರು: ‘ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯವನ್ನು ಖಂಡಿಸಿ ಆಗಸ್ಟ್ 1 ಮತ್ತು 2ರಂದು ದೆಹಲಿ ಚಲೋ ನಡೆಸಲಾಗುತ್ತದೆ’ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ ಹೇಳಿದರು.
‘ದೆಹಲಿಯ ಜಂತರ್ ಮಂತರ್ನಲ್ಲಿ ಎರಡು ದಿನದ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ 250 ಮಂದಿ ಆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ಪರವಾಗಿ ಸಂಸತ್ತಿನಲ್ಲಿ ದನಿ ಎತ್ತಿ ಎಂದು ರಾಜ್ಯದ ಸಂಸದರನ್ನು ಒತ್ತಾಯಿಸಲಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.