ADVERTISEMENT

ಕೆಪಿಎಸ್‌ಸಿ ಪರೀಕ್ಷೆ: ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 21:42 IST
Last Updated 20 ಆಗಸ್ಟ್ 2020, 21:42 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಇದೇ 24ರಂದು ನಡೆಯಲಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಅಂಧರಿಗೆ ಗಂಟೆಗೆ 20 ನಿಮಿಷ ಹೆಚ್ಚುವರಿ ಸಮಯ ನಿಗದಿ ಮಾಡುವಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಿಳಿಸಿದೆ.

ರಾಷ್ಟ್ರೀಯ ಅಂಧರ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಕೇಂದ್ರ ಸರ್ಕಾರದ ಇತ್ತೀಚಿನ ಮಾರ್ಗಸೂಚಿ ‍ಪ್ರಕಾರ ಪರೀಕ್ಷೆಯಲ್ಲಿ ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ ನೀಡಬೇಕು. ರಾಜ್ಯ ಸರ್ಕಾರದ ನಿಯಮಗಳು 10 ನಿಮಿಷ ಸಮಯ ನೀಡಿವೆ. 682 ಅಂಧರು ಕೆಪಿಎಸ್‌ಸಿ ಪೂರ್ವಸಿದ್ಧತಾ ಪರೀಕ್ಷೆ ತೆಗೆದುಕೊಂಡಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.