ADVERTISEMENT

ಕೆಪಿಟಿಸಿಎಲ್‌ ಪರೀಕ್ಷಾ ಅಕ್ರಮ: ಮತ್ತೊಬ್ಬ ಅಭ್ಯರ್ಥಿ ಬಂಧನ

​ಪ್ರಜಾವಾಣಿ ವಾರ್ತೆ
Published 12 ಜನವರಿ 2023, 19:43 IST
Last Updated 12 ಜನವರಿ 2023, 19:43 IST
ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್‌ ಪಾಟೀಲ
ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್‌ ಪಾಟೀಲ   

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 50ಕ್ಕೆ ಏರಿದೆ.

ಕಲಬುರ್ಗಿ ಜಿಲ್ಲೆ ಆಳಂದ ತಾಲ್ಲೂಕಿನ ದರ್ಗಾಶಿರೂರು ಗ್ರಾಮದ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್‌ ಪಾಟೀಲ (28) ಬಂಧಿತ. ಆರೋಪಿಯು ಪರೀಕ್ಷಾ ಕೇಂದ್ರದಲ್ಲಿ ಅಕ್ರಮಕ್ಕೆ ಬಳಸಿದ್ದ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೊಚಿಪ್‌, ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT