ADVERTISEMENT

ಕೆಪಿಟಿಸಿಎಲ್‌ ನೇಮಕಾತಿ ಪರೀಕ್ಷಾ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 22:57 IST
Last Updated 19 ಜನವರಿ 2023, 22:57 IST
ಹನುಮಂತ ಮಲ್ಲಪ್ಪ ಗುದಿಗೊಪ್ಪ
ಹನುಮಂತ ಮಲ್ಲಪ್ಪ ಗುದಿಗೊಪ್ಪ   

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 51ಕ್ಕೆ ಏರಿದೆ.

ಗೋಕಾಕ ತಾಲ್ಲೂಕಿನ ಉಪ್ಪಾರಟ್ಟಿಯ ಹನುಮಂತ ಮಲ್ಲಪ್ಪ ಗುದಿಗೊಪ್ಪ (22) ಬಂಧಿತ. ಈಗಾಗಲೇ ಬಂಧಿತರಾದ ಸಂಜೀವ ಭಂಡಾರಿ, ಬಾಳೇಶ ಕಟ್ಟಿಕಾರ, ಸಿದ್ದಪ್ಪ ಮದಿಹಳ್ಳಿ, ಭೀಮಪ್ಪ ಗುದಿಗೋಪ್ಪ ಅವರೊಂದಿಗೆ ಹನುಮಂತ ಕೂಡ ಸೇರಿದ್ದ. ಇವರೆಲ್ಲರೂ ಕೂಡಿಕೊಂಡು ಏಳು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ಉಪಕರಣ ಮತ್ತು ಮೈಕ್ರೋಚಿಪ್‌ ತಲುಪಿಸಿದ ಆರೋಪ ಇವರ ಮೇಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT