ADVERTISEMENT

ಶಾಸಕ ಕೆ.ಸಿ.ನಾರಾಯಣಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2019, 2:44 IST
Last Updated 8 ಫೆಬ್ರುವರಿ 2019, 2:44 IST
 ಮುಂಬೈನ ಜಸ್‌ಲೋಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ.ಆರ್‌.ಪೇಟೆಯ ಜೆಡಿಎಸ್‌ ಶಾಸಕ ಕೆ.ಸಿ.ನಾರಾಯಣಗೌಡ
ಮುಂಬೈನ ಜಸ್‌ಲೋಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ.ಆರ್‌.ಪೇಟೆಯ ಜೆಡಿಎಸ್‌ ಶಾಸಕ ಕೆ.ಸಿ.ನಾರಾಯಣಗೌಡ   

ಮಂಡ್ಯ: ಬಜೆಟ್‌ ಅಧಿವೇಶನಕ್ಕೆ ಗೈರಾಗಿದ್ದ ಕೆ.ಆರ್‌.ಪೇಟೆಯ ಜೆಡಿಎಸ್‌ ಶಾಸಕ ಕೆ.ಸಿ.ನಾರಾಯಣಗೌಡ ಅವರಿಗೆ ಫುಡ್‌ ಪಾಯ್ಸನ್‌ ಆಗಿದ್ದು, ಮುಂಬೈನ ಜಸ್‌ಲೋಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

‘ಕಾರಣಾಂತರದಿಂದ ಫುಡ್‌ ಪಾಯ್ಸನ್‌ನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದೇನೆ.ಬಜೆಟ್‌ ಅಧಿವೇಶನಕ್ಕೆ ಬರಲು ವೈದ್ಯರು ಬಿಡುತ್ತಿಲ್ಲ. ಆಸ್ಪತ್ರೆಯಿಂದ ಬಿಡುಗಡೆಯಾದ ಕೂಡಲೇ ಅಧಿವೇಶನಕ್ಕೆ ಹಾಜರಾಗುತ್ತೇನೆ, ಜತೆಗೆ, ಕೆ.ಆರ್‌.ಪೇಟೆಗೂ ಬರುತ್ತೇನೆ ಎಂದು ವಿಡಿಯೊದಲ್ಲಿ ನಾರಾಯಣಗೌಡ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.