ADVERTISEMENT

ಭಾಷಾ ಉನ್ನತಾಧಿಕಾರ ಸಮಿತಿಗೆ ಕೃಷ್ಣಶಾಸ್ತ್ರಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 12:58 IST
Last Updated 16 ನವೆಂಬರ್ 2021, 12:58 IST
ಚಮೂ ಕೃಷ್ಣಶಾಸ್ತ್ರಿ
ಚಮೂ ಕೃಷ್ಣಶಾಸ್ತ್ರಿ   

ಬೆಂಗಳೂರು: ಎಲ್ಲ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರ ಸೋಮವಾರ (ನ.15) ರಚಿಸಿರುವ ಉನ್ನತಾಧಿಕಾರ ಸಮಿತಿಗೆ ಕನ್ನಡಿಗರಾಗಿರುವ ಸಂಸ್ಕೃತ ವಿದ್ವಾಂಸ ಚಮೂ ಕೃಷ್ಣಶಾಸ್ತ್ರಿ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೆದಿಲದವರಾದ ಕೃಷ್ಣ ಶಾಸ್ತ್ರಿಗಳು ತಮಿಳುನಾಡಿನ ತಂಜಾವೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರೂ ಆಗಿರುವ ಇವರು, ಸಂಸ್ಕೃತ ಭಾರತಿಯ ಸಹ ಸಂಸ್ಥಾಪಕರಲ್ಲಿ ಒಬ್ಬರು. ಸಂಸ್ಕೃತ ಸಂವರ್ಧನೆಗಾಗಿ ‘ಸಂಸ್ಕೃತ ಸಂವರ್ಧನಾ ಪ್ರತಿಷ್ಠಾನ’ ಸ್ಥಾಪಿಸಿದ್ದಾರೆ.

ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಭಾಷೆಗಳಲ್ಲದೆ, ಅಪಾಯದ ಅಂಚಿನಲ್ಲಿರುವ ಭಾಷೆಗಳು, ಪರಿಚ್ಛೇದದಲ್ಲಿ ಇಲ್ಲದ ಭಾಷೆಗಳು, ಅಲ್ಪಸಂಖ್ಯಾತ, ಬುಡಕಟ್ಟು ಮತ್ತು ಶಾಸ್ತ್ರೀಯ ಭಾಷೆಗಳ ಕುರಿತಾಗಿ ಅಧ್ಯಯನ ನಡೆಸಿ, ಅವುಗಳ ಉನ್ನತಿಗಾಗಿ ಕೆಲಸ ಮಾಡಲು ಉನ್ನತಾಧಿಕಾರ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ.

ADVERTISEMENT

ಈ ಸಮಿತಿಯು ಎರಡು ವರ್ಷಗಳ ಅವಧಿಯಲ್ಲಿ ಭಾಷಾಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ನಡೆಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭಾಷಾಸಂಬಂಧಿತ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಸೂಕ್ತವಾದ ಕ್ರಿಯಾ ಯೋಜನೆಗಳನ್ನು ರೂಪಿಸುವ ಹೊಣೆಗಾರಿಕೆ ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.