ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಭಾನುವಾರ ಸಂಜೆ ವೇಳೆಗೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.10 ಅಡಿಗೆ ತಲುಪಿದೆ.
ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ಹೆಚ್ಚಾಗಿದ್ದು, 37,048 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಕಾವೇರಿ ನೀರಾವರಿ ನಿಗಮ ಹೊರಹರಿವನ್ನು ಹೆಚ್ಚಳ ಮಾಡಿದೆ. ಸದ್ಯ 10,034 ಕ್ಯುಸೆಕ್ ಹೊರಹರಿವು ಇದೆ.
ರಂಗನತಿಟ್ಟು: ದೋಣಿ ವಿಹಾರ ಸ್ಥಗಿತ: (ಶ್ರೀರಂಗಪಟ್ಟಣ)- ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಕೆಆರ್ಎಸ್ ಜಲಾಶಯದ ತಗ್ಗಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ‘ಜಲಾಶಯದಿಂದ ಹೆಚ್ಚು ನೀರನ್ನು ನದಿಗೆ ಬಿಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದೋಣಿ ವಿಹಾರವನ್ನು ಶುಕ್ರವಾರದಿಂದಲೇ ಸ್ಥಗಿತಗೊಳಿಸಲಾಗಿದೆ’ ಎಂದು ಪಕ್ಷಿಧಾಮದ ಆರ್ಎಫ್ಒ ಕೆ.ಸುರೇಂದ್ರ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.