ADVERTISEMENT

120 ಅಡಿ ದಾಟಿದ ಕೆಆರ್‌ಎಸ್‌

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 14:12 IST
Last Updated 9 ಆಗಸ್ಟ್ 2021, 14:12 IST

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿದೆ. ಸೋಮವಾರ ಸಂಜೆಯ ವೇಳೆಗೆ ಜಲಾಶಯದ ನೀರಿನ ಮಟ್ಟ 120.46 ಅಡಿಗೆ ತಲುಪಿದೆ.

ಜಲಾಶಯ ಭರ್ತಿಯಾಗಲು ಕೇವಲ 4.34 ಅಡಿ ಮಾತ್ರವೇ ಬಾಕಿ ಉಳಿದಿದೆ. ಸೋಮವಾರ ಸಂಜೆ ವೇಳೆಗೆ 19,740 ಕ್ಯುಸೆಕ್‌ ಒಳಹರಿವು 5,496 ಹೊರಹರಿವು ಇತ್ತು. ವಾರದಿಂದೀಚೆಗೆ ಜಲಾಶಯಕ್ಕೆ 5 ಅಡಿ ನೀರು ಹರಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT