ADVERTISEMENT

ಸ್ಪರ್ಧಾತ್ಮಕ ಪರೀಕ್ಷೆ ಹೋರಾಟ; 'ಕನ್ನಡಿಗರು ನಪುಂಸಕರು': ಕೆ.ಎಸ್‌.ಭಗವಾನ್‌

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 6:03 IST
Last Updated 20 ಜುಲೈ 2021, 6:03 IST
ಪ್ರೊ.ಕೆ.ಎಸ್.ಭಗವಾನ್
ಪ್ರೊ.ಕೆ.ಎಸ್.ಭಗವಾನ್   

ಮೈಸೂರು: ‘ತಮಿಳರು ಹೋರಾಡಿ ಸ್ಪರ್ಧಾತ್ಮಕ ಪರೀಕ್ಷೆಗಳು ತಮಿಳಿನಲ್ಲಿ ನಡೆಯುವಂತೆ ಮಾಡಿದರು. ಕರ್ನಾಟಕದಲ್ಲಿ ಇನ್ನೂ ಹೋರಾಟ ನಡೆದಿಲ್ಲ. ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು’ ಎಂದು ಸಾಹಿತಿ ಕೆ.ಎಸ್.ಭಗವಾನ್‌ ಹೇಳಿದರು.

ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ಅವರು, 'ಕನ್ನಡ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಬೇಕು' ಎಂದು ಆಗ್ರಹಿಸಿದರು.

‘ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಮೇಕೆದಾಟು ಯೋಜನೆ ವಿರುದ್ಧ ಕೇಂದ್ರಕ್ಕೆ ಮನವಿ ಸಲ್ಲಿಸಿವೆ. ಆದರೆ, ರಾಜ್ಯದಲ್ಲಿ ಯೋಜನೆ ಜಾರಿಗೆ ಆಗ್ರಹಿಸಿ ರಾಜಕೀಯ ಪಕ್ಷಗಳು ಒಂದಾಗಿ ಕೇಂದ್ರದ ಜತೆ ಚರ್ಚಿಸಿಲ್ಲ’ ಎಂದು ವಿಷಾದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.