ಬೆಂಗಳೂರು: ಕಮಿಷನ್ ಪ್ರಕರಣದ ಆರೋಪಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಪಿಎಸ್ಐ ಪರೀಕ್ಷೆ ಅಕ್ರಮದ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಕೆಪಿಸಿಸಿ, ‘ಶೇ 40 ಕಮಿಷನ್ ಹಗರಣದ ಆರೋಪಿ ಈಶ್ವರಪ್ಪನವರ ಬಂಧನ ಆಗಿಲ್ಲ. ಪಿಎಸ್ಐ ಪರೀಕ್ಷೆ ಅಕ್ರಮದ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಬಂಧನವೂ ಆಗಿಲ್ಲ. ದಿವ್ಯಾ ಹಾಗರಗಿಯನ್ನು ಹುಡುಕಲಾಗದಷ್ಟು ಪೊಲೀಸರು ಅಸಮರ್ಥರೇನಲ್ಲ’ ಎಂದು ಹೇಳಿದೆ.
‘ಈ ಮಟ್ಟಿಗೆ ಆರೋಪಿಗಳ ರಕ್ಷಣೆಗೆ ನಿಂತಿರುವವರು ಯಾರು? ಏಕೆ? ದೊಡ್ಡವರ ಹೆಸರುಗಳು ಬಯಲಾಗುವ ಭಯವೇ? ಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಉತ್ತರಿಸುವರೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.