ADVERTISEMENT

ಅನರ್ಹರ ಕುರಿತ ಹೇಳಿಕೆ ಈಶ್ವರಪ್ಪ ಗರಂ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2019, 5:41 IST
Last Updated 29 ಅಕ್ಟೋಬರ್ 2019, 5:41 IST
   

ಶಿವಮೊಗ್ಗ:ಅನರ್ಹ ಶಾಸಕರ ಕುರಿತು ಬಿಜೆಪಿ ಮುಖಂಡರ ಹೇಳಿಕೆಗಳಿಗೆ ಸಚಿವ ಈಶ್ವರಪ್ಪ ಗರಂ ಆಗಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಬ್ಬೊಬ್ಬರು ಒಂದೊಂದು ರೀತಿ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ. ರೇಣುಕಾಚಾರ್ಯ, ಲಕ್ಷ್ಮಣ ಸವದಿ ಹೇಳಿಕೆ ಸರಿಯಲ್ಲ. ಅದು ಪಕ್ಷದ ಅಧ್ಯಕ್ಷರಿಗೆ ಬಿಟ್ಟ ವಿಚಾರ. ಅನರ್ಹ ಶಾಸಕರ ಕುರಿತು ಚರ್ಚೆ ಅನಗತ್ಯ’ ಎಂದರು.

‘ಅವರು ರಾಜೀನಾಮೆ ನೀಡದೆ ಹೋಗಿದ್ದರೆ ಇಷ್ಟು ಬೇಗ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿರಲಿಲ್ಲ. ಅವರ ಅಪೇಕ್ಷೆ ಈಡೇರಿಸುವುದು ಪಕ್ಷದ ಕರ್ತವ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT