ಶಿವಮೊಗ್ಗ: ತಂಬಾಕು ಮಾರಾಟ ಮಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಇನ್ನು ಮುಂದೆ ಪ್ರಕರಣ ದಾಖಲಿಸದಂತೆ ತಾಕೀತು ಮಾಡಿದ್ದಾರೆ.
ಶುಕ್ರವಾರ ನಗರದಲ್ಲಿ ಅಂಗಡಿ ಹಾಗೂ ಗೂಡಂಗಡಿಗಳ ಬಳಿ ಕಾರ್ಯಾ ಚರಣೆ ನಡೆಸಿದದೊಡ್ಡಪೇಟೆ ಠಾಣೆ ಪೊಲೀಸರು, ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ರೊಚ್ಚಿಗೆದ್ದ ಮಾಲೀಕರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಬಳಿ ದೂರಿದ್ದರು. ಈ ಬಗ್ಗೆ ದೊಡ್ಡಪೇಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಫೋನಿನಲ್ಲೇ ತರಾಟೆಗೆ ತೆಗೆದುಕೊಂಡ ಸಚಿವರು , ‘ಇದ್ದಕ್ಕಿದ್ದ ಹಾಗೆ ಏಕೆ ನಿಮಗೆ ಕಾಯಿಲೆ ಬಂದಿದೆ?’ ಎಂದು ಹರಿಹಾಯ್ದಿದ್ದಾರೆ.
‘ದೇಶ, ರಾಜ್ಯದಲ್ಲಿ ಇಲ್ಲದ ಕಾನೂನು ಶಿವಮೊಗ್ಗದಲ್ಲಿ ಏಕೆ? ಮಾರಾಟಗಾರರಿಗೆ ಏಕೆ ತೊಂದರೆ ಕೊಡುತ್ತೀರಿ? ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಿ’ ಎಂದು ತಾಕೀತು ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.