ಬೆಳಗಾವಿ: ಸಿದ್ದರಾಮಯ್ಯ ತಲೆ ಇಲ್ಲದ ಮನುಷ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಈಶ್ವರಪ್ಪನಿಗೆ ಈಗ ಸಮುದಾಯದ ನೆನಪಾಗಿದೆಯಾ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.
ಅವರು ಈ ರೀತಿಯ ತರಲೆ ಮಾತು ಆಡಿಯೇ ಸ್ಥಾನ ಕಳೆದುಕೊಂಡಿದ್ದಾರೆ. ಸಿದ್ದರಾಮಯ್ಯ ಮಾತಿಗೆ ಕಾಂಗ್ರೆಸ್ ಪಕ್ಷದ ನಾಯಕರೇ ಕಿಮ್ಮತ್ತು ಕೊಡುತ್ತಿಲ್ಲ. ನಾವೇಕೆ ಬೆಲೆ ಕೊಡಬೇಕು ಎಂದು ಏಕವಚನದಲ್ಲಿ ತಿರುಗೇಟು ನೀಡಿದರು.ಸಮುದಾಯದ ಸಂಘಟನೆ ವಿಚಾರವಾಗಿ ಸೂಕ್ತ ಸಮಯದಲ್ಲಿ ಸಿದ್ದರಾಮಯ್ಯಗೆ ಉತ್ತರ ಕೊಡ್ತುತ್ತೇನೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.