ADVERTISEMENT

ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಬಂದರೆ ಹೆಲಿಕಾಪ್ಟರ್ ಖರ್ಚು ನಾನೇ ಭರಿಸುವೆ: ಈಶ್ವರಪ್ಪ

ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2023, 10:00 IST
Last Updated 23 ಏಪ್ರಿಲ್ 2023, 10:00 IST
ಈಶ್ವರಪ್ಪ
ಈಶ್ವರಪ್ಪ   

ಶಿವಮೊಗ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ಕಾಲಿಟ್ಟ ಕಡೆ ಕಾಂಗ್ರೆಸ್ ಸೋಲು ನಿಶ್ಚಿತ. ಅವರು ಶಿವಮೊಗ್ಗಕ್ಕೆ ಬಂದು ಹೋಗಲಿ. ಹೆಲಿಕಾಪ್ಟರ್ ಖರ್ಚು ನಾನೇ ಭರಿಸುವೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.

ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಬರಲಿದ್ದಾರಂತೆ ಎಂಬುದನ್ನು ಮಾಧ್ಯಮದವರು ಗಮನ ಸೆಳೆದಾಗ ಮೇಲಿನಂತೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಅವರು ಶಿವಮೊಗ್ಗಕ್ಕೆ ಬಂದು ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ (ಚೆನ್ನಿ) ಗೆಲುವಿಗೆ ನೆರವಾಗಲಿ ಎಂದರು.

ಸಿದ್ದರಾಮಯ್ಯ ಲಿಂಗಾಯಿತ ಸಮುದಾಯದ ವಿರುದ್ಧ ಮಾತನಾಡುವುದನ್ನ ಈಗಲೂ ಮುಂದುವರೆಸಿದ್ದಾರೆ. ಆ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ‌ ಮಾಡಿದಷ್ಟು ದ್ರೋಹ ಯಾರೂ ಮಾಡಿಲ್ಲ. ಲಿಂಗಾಯಿತ ಸಮಾಜವನ್ನು ಒಡೆಯಲು ಹೋಗಿದ್ದರಿಂದಲೇ ಸಿದ್ದರಾಮಯ್ಯ ಸರ್ಕಾರ ಅಧಿಕಾರ ಕಳೆದುಕೊಂಡಿತು ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದರು‌

ADVERTISEMENT

ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ. ಅಧಿಕಾರಕ್ಕೆ ಬರುವುದು ಇರಲಿ. ಮೊದಲು ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆದ್ದು ತೋರಿಸಲಿ ಎಂದು ಈಶ್ವರಪ್ಪ ಸವಾಲು ಹಾಕಿದರು.

ಶಿವಮೊಗ್ಗಕ್ಕೆ ಚುನಾವಣೆ ಪ್ರಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರಲಿದ್ದಾರೆ.

ಆಯನೂರು ಸುತ್ತಮುತ್ತ ಸಾರ್ವಜನಿಕ ಸಭೆ ನಡೆಯುವ ಯೋಜನೆ ರೂಪಿಸಲಾಗಿದೆ. ಆದರೆ ದಿನಾಂಕ ನಿಗದಿಯಾಗಬೇಕಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.