ADVERTISEMENT

ಸಿ.ಡಿ ಪಾಡಿ ಏನೂ ಇಲ್ಲ..: ಕೆ.ಎಸ್. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 17:49 IST
Last Updated 13 ಜನವರಿ 2021, 17:49 IST
ಈಶ್ವರಪ್ಪ
ಈಶ್ವರಪ್ಪ   

ಚಿಕ್ಕಮಗಳೂರು: ‘ಯಾವ ಸಿ.ಡಿ, ಪಾಡಿ ಏನೂ ಇಲ್ಲ. ಯತ್ನಾಳ್‌ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ನೋವಿನಿಂದ ಆ ಮಾತು ಹೇಳಿದ್ದಾರೆ. ಅವರು ಅಸಮಾಧಾನವನ್ನು ಹೊರಹಾಕಿದ್ದಾರೆ,
ಸರಿಪಡಿಸುತ್ತೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯಿಸಿದರು.

ನಗರದಲ್ಲಿ ಬಿಜೆಪಿ ಬುಧವಾರ ಹಮ್ಮಿಕೊಂಡಿದ್ದ ಜನಸೇವಕ ಸಮಾವೇಶದ ಸಂದರ್ಭ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಕಾಂಗ್ರೆಸ್‌, ಜೆಡಿಎಸ್‌ನಿಂದ ಬಿಜೆಪಿಗೆ ಬಂದವರನ್ನು ಸಚಿವರನ್ನಾಗಿ ಮಾಡಿದ್ದೇವೆ. ವಿಶ್ವನಾಥ್‌, ಮುನಿರತ್ನ ಅವರಿಬ್ಬರನ್ನು ತಾಂತ್ರಿಕ ಕಾರಣಗಳಿಂದ ಮಾಡಲು ಸಾಧ್ಯವಾಗಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.