ADVERTISEMENT

ಈಶ್ವರಪ್ಪ ಶಿವಮೊಗ್ಗ ಉಸ್ತುವಾರಿ ಸಚಿವ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2019, 20:46 IST
Last Updated 31 ಆಗಸ್ಟ್ 2019, 20:46 IST

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದರು.

ನೆರೆ ಹಾನಿ ಪರಿಶೀಲನೆಗೆ ಕಾರವಾರಕ್ಕೆ ತೆರಳುವ ಮುನ್ನ ನಗರದಲ್ಲಿ ಶನಿವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು ಉಸ್ತುವಾರಿ ಸಚಿವರ ನೇಮಕದ ವಿಷಯ ಪ್ರಕಟಿಸಿದರು. ಈ ವೇಳೆ ಈಶ್ವರಪ್ಪ ಹಾಗೂ ಕಂದಾಯ ಸಚಿವ ಆರ್‌. ಅಶೋಕ ಅವರೂ ಇದ್ದರು.

ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮದ್ದೂರಿನ ಶಾಸಕ ಡಿ.ಸಿ. ತಮ್ಮಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.