ADVERTISEMENT

ದೇವನಹಳ್ಳಿಗೆ ಎತ್ತಿನಹೊಳೆ ನೀರು: ಸಚಿವ ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 22:35 IST
Last Updated 12 ಮಾರ್ಚ್ 2020, 22:35 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎತ್ತಿನಹೊಳೆ ಯೋಜನೆಯಿಂದ ಜಲಧಾರೆ ಕಾರ್ಯಕ್ರಮದಡಿ ನೀರು ಒದಗಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ವಿಧಾನಸಭೆಯಲ್ಲಿ ಜೆಡಿಎಸ್‌ನ ನಿಸರ್ಗ ನಾರಾಯಣಸ್ವಾಮಿ ಅವರ ಗಮನಸೆಳೆಯುವ ಸೂಚನೆಗೆ ಉತ್ತರ ನೀಡಿ, ತಕ್ಷಣವೇ ₹ 8.90 ಕೋಟಿ ವೆಚ್ಚದಲ್ಲಿ ಕೊಳವೆ ಬಾವಿಗಳನ್ನು ತೋಡಿ ಪೈಪ್‌ಲೈನ್‌ ಅಳವಡಿಸುವ 133 ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಿಗೆ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.

ದೇವನಹಳ್ಳಿ ತಾಲ್ಲೂಕಿನಲ್ಲಿ 1,000 ದಿಂದ 1,500 ಅಡಿಯವರೆಗೂ ಕೊಳವೆ ಬಾವಿಗಳನ್ನು ಕೊರೆದರೂ ನೀರು ಸಿಗುತ್ತಿಲ್ಲ. ಇದರಿಂದ ಶುದ್ಧ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ ಎಂದು ನಾರಾಯಣಸ್ವಾಮಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.