ADVERTISEMENT

ದೇವೇಗೌಡರಿಗೆ ಕಡಿಮೆ ಮಕ್ಕಳಾಗಿರುವುದು ನೋವಾಗಿದೆ: ಈಶ್ವರಪ್ಪ ವ್ಯಂಗ್ಯ

ಈಶ್ವರಪ್ಪ ಪತ್ರಿಕಾಗೋಷ್ಠಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2019, 10:36 IST
Last Updated 13 ಮಾರ್ಚ್ 2019, 10:36 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರಿಗೆ 28 ಮಕ್ಕಳಿದ್ದಿದ್ದರೇ ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಅವರ ಕುಟುಂಬದವರೇ ಸ್ಪರ್ಧಿಸಬಹುದಿತ್ತು. ಆದರೆ ಅವರಿಗೆ ಕಡಿಮೆ ಮಕ್ಕಳಾಗಿರುವುದು ನೋವಾಗಿದೆ ಎಂದುಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ದೊಂಬರಾಟ ನಡೆಯುತ್ತಿದೆ. ದೇವೇಗೌಡರು ನಾನು ಕುಟುಂಬ ರಾಜಕಾರಣ ಮಾಡುವುದಿಲ್ಲಎನ್ನುತ್ತಾರೆ. ಆದರೆ, ಕುಮಾರಸ್ವಾಮಿ, ರೇವಣ್ಣ, ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ನಿಖಿಲ್, ಪ್ರಜ್ವಲ್ ಇವರ್‍ಯಾರು ತಮ್ಮ ಕುಟುಂಬದವರಲ್ಲ. ನಾನೊಬ್ಬ ಬ್ರಹ್ಮಚಾರಿ ಎಂದು ಘೋಷಿಸಲಿ ಎಂದು ಒತ್ತಾಯಿಸಿದರು.

ADVERTISEMENT

ಮಂಡ್ಯದ ಬೆಳವಣಿಗೆಯನ್ನು ಕಾದು ನೋಡುತ್ತಿದ್ದೇವೆ. ಈಗಾಗಲೇ ಬಿಜೆಪಿ ನಾಯಕರು ಸಹೋದರಿ ಸುಮಲತಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಸದ್ಯದಲ್ಲೆ ಬೆಂಗಳೂರಿನಲ್ಲಿ ನಡೆಯುವ ಪಕ್ಷದ ಸಭೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೋ, ಇಲ್ಲವೆ ಸುಮಲತಾ ಅವರಿಗೆ ಬೆಂಬಲ ನೀಡಬೇಕೋ ಎಂಬ ಬಗ್ಗೆನಾಯಕರುತೀರ್ಮಾನಿಸಲಿದ್ದಾರೆ. ಇನ್ನೂ ಎದುರಾಳಿ ಪಕ್ಷದವರು ತಲೆ ಕೆಳಮಾಡಿ, ಕಾಲು ಮೇಲೆ ಮಾಡಿದರೂ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.