ADVERTISEMENT

ಕವಿ ಕಣವಿ, ಗಾಯಕಿ ಅನುರಾಧಾಗೆ ‘ಕೆಎಸ್‌ನ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 20:15 IST
Last Updated 21 ನವೆಂಬರ್ 2018, 20:15 IST
ಚನ್ನವೀರ ಕಣವಿ
ಚನ್ನವೀರ ಕಣವಿ   

ಧಾರವಾಡ: ಕಿಕ್ಕೇರಿಯ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ ನೀಡುವ, ಪ್ರಸಕ್ತ ಸಾಲಿನ ‘ಕೆಎಸ್‌ನ’ ಪ್ರಶಸ್ತಿಗೆ ಹಿರಿಯ ಕವಿ ಡಾ. ಚನ್ನವೀರ ಕಣವಿ ಮತ್ತು ಗಾಯಕಿ ಅನುರಾಧಾ ಧಾರೇಶ್ವರ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಇದೇ 25ರಂದು ಧಾರವಾಡದಲ್ಲಿ ನಡೆಯುವ ಸಮಾರಂಭದಲ್ಲಿ, ಇತಿಹಾಸಕಾರ ಡಾ. ಷ.ಶೆಟ್ಟರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT