ADVERTISEMENT

ಕೆ‍ಪಿಎಸ್‌ಸಿಗೆ ಷಡಕ್ಷರಿಸ್ವಾಮಿ ಹಂಗಾಮಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 20:20 IST
Last Updated 10 ಜನವರಿ 2019, 20:20 IST

ಬೆಂಗಳೂರು: ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷರನ್ನಾಗಿ ಸದಸ್ಯ ಷಡಕ್ಷರಿಸ್ವಾಮಿ ಅವರನ್ನು ನೇಮಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಆಯೋಗಕ್ಕೆ ಕಾಯಂ ಅಧ್ಯಕ್ಷರನ್ನು ನೇಮಿಸುವ ಹೊಣೆಯನ್ನು ಮುಖ್ಯಮಂತ್ರಿಗೆ ಬಿಡಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.

ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಟಿ.ಶ್ಯಾಮ್‌ ಭಟ್‌ ಅಧಿಕಾರಾವಧಿ 2018ರ ಡಿಸೆಂಬರ್‌ 8ಕ್ಕೆ ಮುಕ್ತಾಯಗೊಂಡಿದೆ. ಷಡಕ್ಷರಿಸ್ವಾಮಿ ಅವರು ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಮ್ಮ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.