
ಬೆಂಗಳೂರು: ಕ್ರಿಸ್ಮಸ್ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 1000 ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಡಿ.19, 20 ಮತ್ತು 24ರಂದು ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಡಿ.26 ಮತ್ತು 28ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಬಸ್ಗಳ ವ್ಯವಸ್ಥೆ ಇರಲಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣಗಳಿಂದ ಬಸ್ಗಳು ಸಂಚರಿಸಲಿವೆ.
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ತಿರುಪತಿ, ವಿಜಯವಾಡ, ಹೈದರಾಬಾದ್ ಸಹಿತ ವಿವಿಧೆಡೆಗೆ ವಿಶೇಷ ಬಸ್ಗಳು ಸಂಚರಿಸಲಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. www.ksrtc.karnataka.gov.in ವೆಬ್ಸೈಟ್ ಮೂಲಕ ಇ-ಟಿಕೆಟ್ ಬುಕಿಂಗ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡವಾಗಿ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ 10ರಷ್ಟು ರಿಯಾಯಿತಿ ಸಿಗಲಿದೆ ಎಂದು ಕೆೆಎಸ್ಆರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.