ADVERTISEMENT

ಬಡ್ಡಿ ಸಹಾಯಧನ ಯೋಜನೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 8:19 IST
Last Updated 10 ಜುಲೈ 2020, 8:19 IST
ಕೆಎಸ್‌ಆರ್‌ಟಿಸಿ ಬಸ್
ಕೆಎಸ್‌ಆರ್‌ಟಿಸಿ ಬಸ್   

ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರಿಗೆ ನೀಡುತ್ತಿದ್ದ ಗೃಹ ಸಾಲದ ಮೇಲಿನ ಶೇ 4ರಷ್ಟು ಬಡ್ಡಿ ಸಹಾಯಧನ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

‘ಕೊರೊನಾ ಸೋಂಕು ಹರಡು ತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಲ್ಲದೇ ಸಂಸ್ಥೆ ನಷ್ಟದಲ್ಲಿದೆ. ಆರ್ಥಿಕವಾಗಿ ಸಂಸ್ಥೆ ಪುನಶ್ಚೇತನಗೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಸಂಸ್ಥೆಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT