ADVERTISEMENT

ಸಾರಿಗೆ ಬಸ್‌ಗಳು ಬಾಡಿಗೆಗೆ ಲಭ್ಯ

​ಪ್ರಜಾವಾಣಿ ವಾರ್ತೆ
Published 9 ಮೇ 2020, 19:18 IST
Last Updated 9 ಮೇ 2020, 19:18 IST
   

ಬೆಂಗಳೂರು: ಲಾಕ್‌ಡೌನ್‌ ಕಾರಣದಿಂದ ರಾಜ್ಯದಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು, ಯಾತ್ರಿಕರು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರರು ಬೇರೆ ರಾಜ್ಯಗಳಿಗೆ ತೆರಳಲು ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ, ವಾಯವ್ಯ, ಈಶಾನ್ಯ) ಬಸ್ಸುಗಳನ್ನು ಬಾಡಿಗೆಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಶನಿವಾರ ಸುತ್ತೋಲೆ ಹೊರಡಿಸಲಾಗಿದೆ. ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಾರಂಭಿಸಲು ಅನುಮತಿ ನೀಡಿರುವ ಕೈಗಾರಿಕೆಗಳು ಕೂಡಾ ತಮ್ಮ ಕಾರ್ಮಿಕರನ್ನು ಕರೆದೊಯ್ಯಲು ಸಾರಿಗೆ ನಿಗಮದ ಬಸ್ಸುಗಳನ್ನು ಬಾಡಿಗೆಗೆ ಪಡೆಯಬಹುದು ಎಂದೂ ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT