ಬೆಂಗಳೂರು: ಸಮಾನ ವೇತನಕ್ಕೆ ಆಗ್ರಹಿಸಿ ರಾಜ್ಯದಾದ್ಯಂತ ಸೈಕಲ್ ಜಾಥಾ ನಡೆಸಲು ಸಾರಿಗೆ ಸಂಸ್ಥೆಗಳ ನೌಕರರು ನಿರ್ಧರಿಸಿದ್ದಾರೆ.
ಇದೇ 10ರಂದು ಬಳ್ಳಾರಿಯಿಂದ ಜಾಥಾ ಹೊರಡಲಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಸಂಚರಿಸಲಿದೆ. ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಾರಿಗೆ ಸಂಸ್ಥೆಗಳ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದರು.
ವಜಾಗೊಂಡ ನೌಕರರ ಮರು ನೇಮಕ, ಸಮಾನ ವೇತನದ ಲಿಖಿತ ಭರವಸೆ ಈಡೇರಿಕೆ, ನೌಕರರ ಪೊಲೀಸ್ ಪ್ರಕರಣ ವಾಪಸ್ ಪಡೆಯಬೇಕು, ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಈ ಜಾಥಾ ನಡೆಸಲಾಗುತ್ತಿದೆ. ಎಲ್ಲಾ ಜಿಲ್ಲಾ ಕೇಂದ್ರಗಳ ಮೂಲಕ ಜಾಥಾ ಸಂಚರಿಸಿ ಬೆಂಗಳೂರಿಗೆ ಬರಲು ಕನಿಷ್ಠ 50 ದಿನ ಬೇಕಾಗಲಿದೆ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.