ADVERTISEMENT

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಗಳಿಕೆ ರಜೆ ಮೊತ್ತ ಪಾವತಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 21:02 IST
Last Updated 28 ಸೆಪ್ಟೆಂಬರ್ 2022, 21:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ದಸರಾ ಹಬ್ಬಕ್ಕೆ ನೌಕರರಿಗೆ ಸಿಹಿ ಸುದ್ದಿ ನೀಡಿರುವ ಕೆಎಸ್‌ಆರ್‌ಟಿಸಿ, ಗಳಿಕೆ ರಜೆ ನಗದೀಕರಣ ಮೊತ್ತ ಪಾವತಿಸುವುದಾಗಿ ತಿಳಿಸಿದೆ.

ಕೋವಿಡ್‌ನಿಂದ ಉಂಟಾಗಿದ್ದ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸಿಬ್ಬಂದಿಗೆ ಗಳಿಕೆ ರಜೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಆರ್ಥಿಕವಾಗಿ ಚೇತರಿಕೆ ಹಂತದಲ್ಲಿದ್ದರೂ ನೌಕರರಿಗೆ ಹಬ್ಬದ ಸಡಗರ ಹೆಚ್ಚಿಸಲು ನಿಗಮ ತೀರ್ಮಾನಿಸಿದೆ. 2021–22ನೇ ಸಾಲಿನ ಗಳಿಕೆ ರಜೆ ನಗದೀಕರಣ ಮೊತ್ತವನ್ನು ಅ.3ರಂದು ಎಲ್ಲಾ ಅರ್ಹ ಸಿಬ್ಬಂದಿಗೆ ಪಾವತಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT