ಬೆಂಗಳೂರು: ಇದೇ 17ರಿಂದ ಅಂತರರಾಜ್ಯ ಬಸ್ ಸಂಚಾರ ಆರಂಭಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.
ಮೊದಲ ಹಂತದಲ್ಲಿ ಆಂಧ್ರ ಪ್ರದೇಶದ ವಿವಿಧ ನಗರಗಳಿಗೆ ಹವಾನಿಯಂತ್ರಿತ ರಹಿತ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ಅನಂತಪುರ, ಹಿಂದುಪುರ, ಕದ್ರಿ, ಪುಟ್ಟಪರ್ತಿ, ಕಲ್ಯಾಣದುರ್ಗ, ರಾಯದುರ್ಗ, ಕಡಪ, ಪ್ರೂದತ್ತೂರು, ಮಂತ್ರಾಲಯ, ತಿರುಪತಿ, ಚಿತ್ತೂರು, ಮದನಪಲ್ಲಿ, ನೆಲ್ಲೂರು ಮತ್ತು ವಿಜಯವಾಡಕ್ಕೆ ಬಸ್ಗಳು ಕಾರ್ಯಾಚರಣೆಗೊಳ್ಳಲಿವೆ.
ಬಳ್ಳಾರಿಯಿಂದ ವಿಜಯವಾಡ, ಅನಂತಪುರ, ಕರ್ನೂಲು ಮತ್ತು ಮಂತ್ರಾಲಯಕ್ಕೆ, ರಾಯಚೂರನಿಂದ ಮಂತ್ರಾಲಯ ಮತ್ತು ಕರ್ನೂಲಿಗೆ ಬಸ್ಗಳ ಸಂಚಾರ ಆರಂಭವಾಗಲಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.