ADVERTISEMENT

ಕೆಎಸ್‌ಆರ್‌ಟಿಸಿ: ದೈಹಿಕವಾಗಿ ಅಸಮರ್ಥರಾದವರಿಗೆ ಸ್ವಯಂ ನಿವೃತ್ತಿ 

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 15:44 IST
Last Updated 9 ಜೂನ್ 2020, 15:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ದೈಹಿಕವಾಗಿ ಅಸಮರ್ಥಗೊಂಡ ಅಧಿಕಾರಿಗಳು ಮತ್ತು ನೌಕರರಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಕೆಎಸ್‌ಆರ್‌ಟಿಸಿ ಪ್ರಕಟಿಸಿದೆ.

ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ಕಾರಣದಿಂದ ಮತ್ತು ನೌಕರರ ಹಿತದೃಷ್ಟಿಯಿಂದ ಈ ಯೋಜನೆ ಘೋಷಿಸಲಾಗಿದೆ ಎಂದು ನಿಗಮ ಹೇಳಿದೆ.

ಸ್ವಯಂ ನಿವೃತ್ತಿ ತೆಗೆದುಕೊಳ್ಳುವವರಿಗೆ ಆಕರ್ಷಣೀಯ ಪರಿಹಾರವೂ ಸಿಗಲಿದೆ. ಸಂಬಂಧಪಟ್ಟ ನೌಕರರು ಈ ಕುರಿತು ಅರ್ಜಿ ಸಲ್ಲಿಸಬೇಕು ಎಂದು ಮಂಗಳವಾರ ಸುತ್ತೋಲೆ ಹೊರಡಿಸಿರುವ ನಿಗಮವು, ಈ ಅರ್ಜಿಗಳನ್ನು ಪರಿಶೀಲಿಸಿ ಅಂಗೀಕರಿಸಲು ಸಮಿತಿಯನ್ನೂ ರಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.