ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆ.7 ರಿಂದ 19ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಉಚಿತ ಬಸ್ ಸೌಲಭ್ಯ ಕಲ್ಪಿಸಿದೆ.
ವಿದ್ಯಾರ್ಥಿಗಳು ತಮ್ಮ ಊರುಗಳಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್ನಲ್ಲಿ ಪ್ರವೇಶ ಪತ್ರವನ್ನು ತೊರಿಸಬೇಕು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಪರೀಕ್ಷಾ ವೇಳಾಪಟ್ಟಿ:7ರಂದು ಬೆಳಿಗ್ಗೆ (10.15ರಿಂದ 1.30ರವರೆಗೆ) ಉರ್ದು, ಸಂಸ್ಕೃತ, ಮಧ್ಯಾಹ್ನ (2.15ರಿಂದ 5.30) ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ನೆಸ್, ಗೃಹ ವಿಜ್ಞಾನ (ಎನ್ಎಸ್ಕ್ಯೂಎಫ್), 8ರಂದು ಬೆಳಿಗ್ಗೆ ಇತಿಹಾಸ, ಸಂಖ್ಯಾಶಾಸ್ತ್ರ, ಜೀವವಿಜ್ಞಾನ, 9ರಂದು ಬೆಳಿಗ್ಗೆ ಹಿಂದಿ, ಮಧ್ಯಾಹ್ನ ತಮಿಳು, ತೆಲುಗು, ಮಲಯಾಳ, ಮರಾಠಿ, ಅರೆಬಿಕ್, ಫ್ರೆಂಚ್, 10ರಂದು ಬೆಳಿಗ್ಗೆ ಇಂಗ್ಲಿಷ್, 11ರಂದು ಬೆಳಿಗ್ಗೆ ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಗಣಿತ ವಿಜ್ಞಾನ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಭೂಗರ್ಭ ವಿಜ್ಞಾನ, 12ರಂದು ಬೆಳಿಗ್ಗೆ ಅರ್ಥಶಾಸ್ತ್ರ, ಭೌತವಿಜ್ಞಾನ ಪರೀಕ್ಷೆ ನಡೆಯಲಿದೆ.
14ರಂದು ಬೆಳಿಗ್ಗೆ ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನ ವಿಜ್ಞಾನ, ಶಿಕ್ಷಣ, 15ರಂದು ಬೆಳಿಗ್ಗೆ ಕನ್ನಡ, 16ರಂದು ಬೆಳಿಗ್ಗೆ ರಾಜ್ಯ ಶಾಸ್ತ್ರ, ಮೂಲ ಗಣಿತ, 17ರಂದು ಬೆಳಿಗ್ಗೆ ಸಮಾಜ ವಿಜ್ಞಾನ, ಲೆಕ್ಕಶಾಸ್ತ್ರ, ಗಣಿತ, 18ರಂದು ಬೆಳಿಗ್ಗೆ ಭೂಗೋಳ ವಿಜ್ಞಾನ, ಮಧ್ಯಾಹ್ನ ಮನಃಶಾಸ್ತ್ರ ಪರೀಕ್ಷೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.