ADVERTISEMENT

ಕೂಡ್ಲಿಗಿ: ಲಾರಿಗೆ ಕಾರು ಡಿಕ್ಕಿಯಾಗಿ ಮೂರು ಜನ ಸಾವು

​ಪ್ರಜಾವಾಣಿ ವಾರ್ತೆ
Published 17 ಮೇ 2020, 7:57 IST
Last Updated 17 ಮೇ 2020, 7:57 IST
ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಕಾರು
ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಕಾರು   

ಕಾನಹೊಸಹಳ್ಳಿ: ಗ್ರಾಮದ ಹೊರವಲಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50ರ ಮೇಲ್ಸೇತುವೆ ಮೇಲೆ ಭಾನುವಾರ ಬೆಳಗಿನ ಜಾವ ಕಾರೊಂದು ಕಂಟೇನರ್ ಲಾರಿಗೆ ಡಿಕ್ಕಿಯಾಗಿ, ಕಾರಿನಲ್ಲಿದ್ದ ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಮುದ್ದೇಬಿಹಾಳ ತಾಲ್ಲೂಕಿನ ಮಿನಜಗಿ ಗ್ರಾಮದ ಕಾರ್ ಚಾಲಕ ದೇವರಾಜ್(21), ಭೀಮರಾವ್(28) ಹಾಗೂ ಅಂಜನದೇವಿ(14) ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ಹೊರಟಿದ್ದು, ಭಾನುವಾರ ಬೆಳಗಿನ ಜಾವ ಕಾನಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಮೇಲ್ಸೇತುವೆ ಮೇಲೆ ಬರುವಾಗ ಚಾಲಕ ಅಜಾಗರೂಕತೆ ಹಾಗೂ ಅತಿವೇಗದಿಂದ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಮತ್ತೊಂದು ರಸ್ತೆಗೆ ಹೋಗಿದ್ದು, ಎದುರಿಗೆ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪಿಎಸ್‍ಐ ಎಚ್. ನಾಗರಾಜ ತಿಳಿಸಿದ್ದು, ಮೃತರ ಸಂಬಂಧಿಕರು ಬಂದ ನಂತರ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.