ADVERTISEMENT

ಕುಮಾರಸ್ವಾಮಿ ಕಣ್ಣೀರು ಬರೀ ನಾಟಕವಷ್ಟೆ: ಸಚಿವ ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 12:53 IST
Last Updated 11 ಆಗಸ್ಟ್ 2022, 12:53 IST
ಡಾ.ಸಿ.ಎನ್‌.ಅಶ್ವತ್ಥನಾರಾಯಣ – ಎಚ್‌.ಡಿ. ಕುಮಾರಸ್ವಾಮಿ
ಡಾ.ಸಿ.ಎನ್‌.ಅಶ್ವತ್ಥನಾರಾಯಣ – ಎಚ್‌.ಡಿ. ಕುಮಾರಸ್ವಾಮಿ   

ಮಂಡ್ಯ: ‘ಎಚ್‌.ಡಿ.ಕುಮಾರಸ್ವಾಮಿ ಅವರ ಕಣ್ಣೀರು ಭಾವನಾತ್ಮಕ ಅಲ್ಲ, ಬರೀ ನಾಟಕವಷ್ಟೆ. ಅಧಿಕಾರ ಇದ್ದಾಗ ಕೆಲಸ ಮಾಡಬೇಕು, ಕಣ್ಣೀರು ಹಾಕಿದರೆ ಏನು ಪ್ರಯೋಜನ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಗುರುವಾರ ಪ್ರಶ್ನಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಅವರು ಮುಖ್ಯಮಂತ್ರಿಯಾಗಿದ್ದಾಗ ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ಇದ್ದು ಸರ್ಕಾರ ನಡೆಸುತ್ತಿದ್ದರು. ಈ ವಿಚಾರದ ಬಗ್ಗೆ ಅವರು ಇಲ್ಲಿಯವರೆಗೂ ಉತ್ತರ ಕೊಡಲು ಸಾಧ್ಯವಾಗಿಲ್ಲ’ ಎಂದರು.

‘ಎಸಿಬಿಯನ್ನು ರದ್ದು ಮಾಡಿರುವ ಹೈಕೋರ್ಟ್‌ ಆದೇಶವನ್ನು ನಾವು ಗೌರವಿಸುತ್ತೇವೆ. ಶೀಘ್ರ ಪಕ್ಷ ಹಾಗೂ ಸರ್ಕಾರದ ನಿಲುವನ್ನು ತಿಳಿಸುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.