ಬೆಂಗಳೂರು: ಅಧಿವೇಶನದಲ್ಲಿ ಪಾಲ್ಗೊಳ್ಳುವಮೊದಲು ತಂದೆ ದೇವೇಗೌಡರ ಮನೆಗೆ ಧಾವಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುದೀರ್ಘ ಚರ್ಚೆಯಲ್ಲಿ ತಲ್ಲೀನರಾಗಿದ್ದಾರೆ. ಇಂದು ಸದನ ನಡೆಸುವ ಮತ್ತು ತಮ್ಮ ಮುಂದಿನ ಹೆಜ್ಜೆಗಳ ಬಗ್ಗೆಕಾರ್ಯತಂತ್ರ ಹೆಣೆಯುತ್ತಿದ್ದಾರೆ.
‘ರಾಜೀನಾಮೆಯ ಪ್ರಸ್ತಾಪ ಮಾಡುವುದು ಬೇಡ. ಏನು ಬೇಕಾದರೂ ಆಗಬಹುದು. ಧೈರ್ಯಗೆಡದೆ ಪರಿಸ್ಥಿತಿ ಎದುರಿಸು’ ಎಂದು ದೇವೇಗೌಡರಿಂದ ಪುತ್ರನಿಗೆ ಹಿತೋಪದೇಶ. ಎರಡು ತಾಸು ಸಮಾಲೋಚನೆಯ ನಂತರ ವಿಧಾನಸೌಧದ ಕಡೆಗೆ ಹೊರಟರು ಕುಮಾರಸ್ವಾಮಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.