ADVERTISEMENT

ಸಿದ್ಧಗಂಗಾ ಶ್ರೀಗಳಿಗೆ ಸರ್ಕಾರದ ವೆಚ್ಚದಲ್ಲೇ ಹೆಚ್ಚಿನ ಚಿಕಿತ್ಸೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 5:30 IST
Last Updated 7 ಡಿಸೆಂಬರ್ 2018, 5:30 IST
   

ಚಿಕ್ಕಮಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ಕರೆದೊಯ್ಯಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಶೃಂಗೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸ್ವಾಮೀಜಿ ಆರೋಗ್ಯದಲ್ಲಿ ಚಿಕ್ಕಪುಟ್ಟ ಏರುಪೇರಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಪರೀಕ್ಷಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಕರೆದೊಯ್ಯಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಎಲ್ಲ ವ್ಯವಸ್ಥೆಗಳನ್ನು ಸರ್ಕಾರದ ವೆಚ್ಚದಲ್ಲಿ ಮಾಡಲಾಗುವುದು. ಪ್ರತಿ ಕ್ಷಣದ ಮಾಹಿತಿ ಪಡೆದು ವ್ಯವಸ್ಥೆ ಮಾಡುವಂತೆ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.

ADVERTISEMENT

***

ಐ ಕ್ಯಾಟ್ ಏರ್ ಆಂಬುಲೆನ್ಸ್ ನಲ್ಲಿ ಚೆನ್ನೈಗೆ ಸ್ವಾಮೀಜಿ
ತುಮಕೂರು:
ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಮತ್ತಷ್ಟು ಸುಧಾರಣೆಗೆ ಚೆನ್ನೈನ ಡಾ. ರೇಲಾ ಇಂಟರ್ ನ್ಯಾಷನಲ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್‌ಗೆಕರೆದುಕೊಂಡು ಹೋಗಲಾಗುವುದು.

ಮಠದಿಂದ ಬೆಳಿಗ್ಗೆ 10.30 ಕ್ಕೆ ಸ್ವಾಮೀಜಿ ಹೊರಟಿದ್ದು, ಬೆಂಗಳೂರಿನ ಎಚ್‌ಎಎಲ್‌ವಿಮಾನ ನಿಲ್ದಾಣದಿಂದ ಐ ಕ್ಯಾಟ್ ಏರ್ ಅಂಬುಲೆನ್ಸ್‌ನಲ್ಲಿ ಮಧ್ಯಾಹ್ನ 12.30ಕ್ಕೆ ತೆರಳಲಿದ್ದಾರೆ.

ಸ್ವಾಮೀಜಿ ಅವರೊಂದಿಗೆ ಸಿದ್ಧಗಂಗಾ ಆಸ್ಪತ್ರೆಯ ಡಾ. ಪರಮೇಶ್, ಸ್ವಾಮೀಜಿ ಆರೈಕೆದಾರ ಮಲ್ಲಾರಾಧ್ಯ ಅವರು ಏರ್ ಅಂಬುಲೆನ್ಸ್‌ನಲ್ಲಿ ತೆರಳಲಿದ್ದಾರೆ.

ಸ್ವಾಮೀಜಿಯವರು ಕಾರಿನಲ್ಲಿ ಹೊರಡುತ್ತಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.