ADVERTISEMENT

ಕೊಲ್ಲೂರು ಮೂಕಾಂಬಿಕಾ ಜನ್ಮಾಷ್ಟಮಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 19:45 IST
Last Updated 7 ಜೂನ್ 2022, 19:45 IST
ಕೊಲ್ಲೂರು ಮೂಕಾಂಬಿಕೆ ಜನ್ಮಾಷ್ಟಮಿ ಪ್ರಯುಕ್ತ ರಥೋತ್ಸವ ನಡೆಯಿತು
ಕೊಲ್ಲೂರು ಮೂಕಾಂಬಿಕೆ ಜನ್ಮಾಷ್ಟಮಿ ಪ್ರಯುಕ್ತ ರಥೋತ್ಸವ ನಡೆಯಿತು   

ಕುಂದಾಪುರ: ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದಲ್ಲಿ ಮಂಗಳವಾರ ಮೂಕಾಂಬಿಕಾ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಭಕ್ತರು ಭಾಗಿಯಾದರು.

ಜನದಟ್ಟಣೆಯಿಂದ ದರ್ಶನ ಹಾಗೂ ಅನ್ನ ಸಂತರ್ಪಣೆ ವ್ಯವಸ್ಥೆ ನಿಭಾಯಿಸಲು ದೇವಸ್ಥಾನದ ಸಿಬ್ಬಂದಿ ಹರಸಾಹಸ ಪಟ್ಟರು. ಮಧ್ಯಾಹ್ನದ ಮಂಗಳಾರತಿಯ ವೇಳೆಯಲ್ಲಿ ತುಂತುರು ಮಳೆ ಸುರಿಯಲಾರಂಭಿಸಿದ್ದರಿಂದ ಭಕ್ತರು ದೇಗುಲದ ಪ್ರಾಂಗಣದಲ್ಲಿ ಸೇರಿದ್ದರಿಂದ ತುಸು ಗೊಂದಲ, ನೂಕು ನುಗ್ಗಲು ಉಂಟಾಯಿತು.

ಜನ್ಮಾಷ್ಟಮಿಯ ಪ್ರಯುಕ್ತ ದೇವಸ್ಥಾನದ ಸ್ವರ್ಣಮುಖಿ ರಂಗಮಂಟಪದಲ್ಲಿ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಕಲಾವಿದರು ಸಾಂಸ್ಕೃತಿಕ ಸೇವಾ ಪ್ರದರ್ಶನ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.