ಕುಣಿಗಲ್: ಬೆಂಗಳೂರಿನಿಂದ ಕೊಣನೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ.
ಮೃತರು ನಾಗಮಂಗಲ ತಾಲ್ಲೂಕು ಅಂಚೆಚಿಟ್ಟನಹಳ್ಳಿ ಗ್ರಾಮದ ಶಂಕರ್ (45) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದು, ಸ್ವಗ್ರಾಮಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ತಾಲ್ಲೂಕಿನ ಅಂಚೆಪಾಳ್ಯ ಬಳಿ ಬಂದಾಗ ತೀವ್ರವಾಗಿ ಅಸ್ವಸ್ಥರಾಗಿದ್ದು, ಇದನ್ನು ಗಮನಿಸಿದ ಚಾಲಕ ಲೋಕೇಶ್ ಬಸ್ಅನ್ನು ಎಲ್ಲೂ ನಿಲ್ಲಿಸದೆ ನೇರವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಳಿಗೆ ಬಂದು ನಿಲ್ಲಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ ಸಮಯದಲ್ಲಿ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.