ADVERTISEMENT

ಹೊಸಪೇಟೆ: ಕುರುಬ ನಾಯಕರಿಗೆ ಸಚಿವ ಸ್ಥಾನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 9:19 IST
Last Updated 4 ಜೂನ್ 2020, 9:19 IST
ಕುರುಬ ಜನಾಂಗಕ್ಕೆ ಮಂತ್ರಿ ಸ್ಥಾನ ನೀಡಬೇಕೆಂದು ತಾಲೂಕು ಸಂಘ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು
ಕುರುಬ ಜನಾಂಗಕ್ಕೆ ಮಂತ್ರಿ ಸ್ಥಾನ ನೀಡಬೇಕೆಂದು ತಾಲೂಕು ಸಂಘ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು   

ಹೊಸಪೇಟೆ: ಕುರುಬ ಸಮಾಜದ ಎಚ್‌. ವಿಶ್ವನಾಥ್‌, ಎಂ.ಟಿ.ಬಿ. ನಾಗರಾಜ್‌ ಹಾಗೂ ಆರ್‌. ಶಂಕರ್‌ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಿಲ್ಲಾ ಕುರುಬರ ಸಂಘ ಆಗ್ರಹಿಸಿದೆ.

ಈ ಸಂಬಂಧ ಸಂಘದ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಬಿ.ಎಸ್‌.ಯಡಿಯೂರಪ್ಪನವರಿಗೆ ಬರೆದ ಪತ್ರವನ್ನು ಉಪ ತಹಶೀಲ್ದಾರ್‌ ಅಮರನಾಥ ಅವರಿಗೆ ಸಲ್ಲಿಸಿದರು.

‘ಮೂವರು ಕುರುಬ ಸಮಾಜದ ನಾಯಕರಿಂದ ಯಡಿಯೂರಪ್ಪನವರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ಇದುವರೆಗೆ ಅವರಿಗೆ ಸಚಿವ ಸ್ಥಾನ ನೀಡದೇ ಇರುವುದು ದುರದೃಷ್ಟಕರ. ಇದು ಕುರುಬ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ಮೂವರಿಗೂ ಸಂಪುಟಕ್ಕೆ ಸೇರಿಸಿಕೊಂಡು ಅಸಮಾಧಾನ ದೂರ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ಜಿಲ್ಲಾ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ಎಚ್‌. ಮಹೇಶ್‌, ಮುಖಂಡರಾದ ಕುಬೇರ ದಲ್ಲಾಳಿ, ದಾಸನಾಳ್ ಹನುಮೇಶ್, ಎಲ್.ಎಸ್.ಆನಂದ್, ಸೋಮಣ್ಣ, ಕಣ್ಣೀರಿ ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.