ADVERTISEMENT

ಕುರುಬ ಎಸ್‌ಟಿ ಸಮಿತಿ ನಿಯೋಗ ದೆಹಲಿಗೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 19:45 IST
Last Updated 22 ನವೆಂಬರ್ 2020, 19:45 IST

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌.ಟಿ ಪಟ್ಟಿಗೆ ಸೇರಿಸಲು ಸಹಕಾರ ನೀಡುವಂತೆ ಕೇಂದ್ರ ಸಮಾಜ ಕಲ್ಯಾಣ ಸಚಿವ ಅರ್ಜುನ ಮುಂಡಾ ಮತ್ತು ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಲು ಕುರುಬರ ಎಸ್.ಟಿ ಹೋರಾಟ ಸಮಿತಿಯ ನಿಯೋಗ ಸೋಮವಾರ ದೆಹಲಿಗೆ ತೆರಳಲಿದೆ.

ನಿಯೋಗದ ನೇತೃತ್ವವನ್ನು ಕುರುಬ ಸಮುದಾಯದ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಹಿಸಲಿದ್ದಾರೆ.

ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರುಪಾಕ್ಷಪ್ಪ, ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶಮೂರ್ತಿ, ಅಹಿಂದ ಮುಖಂಡರಾದ ಕೆ. ಮುಕುಡಪ್ಪ, ಸಮಿತಿ ಖಜಾಂಚಿ ಕೆ.ಈ. ಕಾಂತೇಶ, ಟಿ.ಬಿ. ಬಳಗಾವಿ, ಕೆ. ಬಿ. ಶಾಂತಪ್ಪ, ಪುಟ್ಟಸ್ವಾಮಿ, ಸಮಿತಿ ಪ್ರಧಾನ ಕಾರ್ಯದರ್ಶಿ ಆನೇಕಲ್ದೊಡ್ಡಯ್ಯ ಕೂಡಾ ನಿಯೋಗದಲ್ಲಿ ಇರಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.