ಬೆಂಗಳೂರು: ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯು ಜೀವನ್ಮುಖಿ ಕನ್ನಡ ಪಾಕ್ಷಿಕ ಪತ್ರಿಕೆ ಸಹಯೋಗದಲ್ಲಿ ನೀಡುತ್ತಿರುವ 11ನೇ ವರ್ಷದ ‘ಜೀವನ್ಮುಖಿ’ ಪ್ರಶಸ್ತಿಗೆ ನಾಲ್ವರು ಆಯ್ಕೆಯಾಗಿದ್ದಾರೆ.
‘ಸಾಹಿತಿ ಗೊ.ರು.ಚನ್ನಬಸಪ್ಪ, ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ, ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಪೂರ್ವ ವಲಯದ ಉಪ ಆಯುಕ್ತ ಎಸ್.ಶಶಿಕಿರಣ್ ಹಾಗೂ ಸಮಾಜ ಸೇವಕ ಬಿ.ಎಂ.ಶಶಿಧರ್ ಅವರನ್ನು 2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೇ 29 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.