ADVERTISEMENT

ಕೆಯುಡಬ್ಲ್ಯುಜೆ: ದತ್ತಿ ನಿಧಿ ಪ್ರಶಸ್ತಿಗೆ ಶಂಕರ ಪಾಗೋಜಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 20:20 IST
Last Updated 26 ಜನವರಿ 2023, 20:20 IST
   

ಬೆಂಗಳೂರು: ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕ ರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯುಜೆ) ಸ್ಥಾಪಿಸಿರುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ಆಯ್ಕೆ ಮಾಡಲಾಗಿದೆ.

ಸದ್ಯ ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿರುವ ಪಾಗೋಜಿ, ವಿವಿಧ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ವಿಜಯಪುರದಲ್ಲಿ ಫೆ.4 ಮತ್ತು 5 ರಂದು ನಡೆಯಲಿರುವ ಪತ್ರಕರ್ತರ\ 37ನೇ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿವಂಗತ ಗುರುಲಿಂಗ ಸ್ವಾಮಿ ಹೊಳಿಮಠ ಹೆಸರಿನ ದತ್ತಿನಿಧಿಗೆ ಚಾಲನೆ ನೀಡಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT