ADVERTISEMENT

ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಪ್ರಧಾನಿ, ರಾಷ್ಟ್ರಪತಿಗೆ ಮನವಿ: ಕುಮಾರಸ್ವಾಮಿ

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 6:14 IST
Last Updated 18 ಜನವರಿ 2019, 6:14 IST
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ   

ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮತ್ತೊಮ್ಮೆ ಪ್ರಧಾನಿ, ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇನೆ. ಇಂದು ಮಧ್ಯಾಹ್ನ ಮಠಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತೇನೆ. ದೇವರ ದಯೆಯಿಂದ‌ ಅವರು ಬೇಗ ಗುಣಮುಖರಾಗಲಿ, ಬಹಳ ವರ್ಷಗಳು ನಮ್ಮ‌ ಜೊತೆಇರ‌ಲಿ’ ಎಂದು ಹೇಳಿದರು.

ಗುರುಗ್ರಾಮದಲ್ಲಿರುವ ರಾಜ್ಯ ಬಿಜೆಪಿ ಶಾಸಕರುನಾಳೆ ವಾಪಸ್‌ ಬರುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಯ್ಯೋ ಪಾಪ ಅವರೆಲ್ಲ ರೆಸ್ಟ್‌ಗೆ ಹೋಗಿದ್ದಾರೆ. ಈಗಲಾದರೂ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿ' ಎಂದು ವ್ಯಂಗ್ಯವಾಡಿದರು.

ADVERTISEMENT

ಜ.27ರವರೆಗೆ ಸಾರ್ವಜನಿಕರಿಗೆ ಫಲಪುಷ್ಪ ಪ್ರದರ್ಶನ ಇರಲಿದೆ.

ಸಹಸ್ರಾರು ಹೂಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಬದುಕಿನ ಪ್ರಮುಖ ಘಟನೆಗಳು ತೆರೆದುಕೊಳ್ಳಲಿವೆ. ಪ್ರದರ್ಶನಕ್ಕೆ ಭೇಟಿ ನೀಡುವ ಸಸ್ಯ ಪ್ರೇಮಿಗಳಿಗೆ ಮತ್ತು ತೋಟಗಾರಿಕೆ ಆಸಕ್ತರಿಗಾಗಿ ಔಷಧಿ, ಆಲಂಕಾರಿಕ ಸಸ್ಯಗಳು ಹಾಗೂ ಬೊನ್ಸಾಯ್ ಗಿಡಗಳು, ತೋಟಗಾರಿಕೆ ಸಲಕರಣೆಗಳು ದೊರೆಯುತ್ತವೆ.

ಸಬರಮತಿ ಆಶ್ರಮದ‌ ಮುಂದೆ ಗಾಂಧಿ ವೇಷಧಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.