ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂಗಳವಾರ ಮೇಲ್ಮನೆಯಲ್ಲಿ ಅಭಿನಂದಿಸಲಾಯಿತು.
ಸಭೆ ಆರಂಭವಾಗುತ್ತಿದ್ದಂತೆಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಆಡಳಿತ, ವಿರೋಧ ಪಕ್ಷದ ಸದಸ್ಯರು ಪಕ್ಷ ಭೇದ ಮರೆತು ಕೈಕುಲುಕಿ ಶುಭ ಹಾರೈಸಿದರು.
ಅಭಿನಂದಿಸಿದ ಎಲ್ಲರಿಗೂ ಸವದಿ ಕೃತಜ್ಞತೆ ಸಲ್ಲಿಸಿದರು. ಎಲ್ಲರ ಮಾರ್ಗದರ್ಶನ ಪಡೆದು ಅಭಿವೃದ್ಧಿ ಕೆಲಸಗಳಿಗೆ ಒತ್ತುನೀಡುವುದಾಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.