ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ವಂಚನೆ ಹಗರಣದಲ್ಲಿ ಠೇವಣಿದಾರರ ಹಿತರಕ್ಷಣೆಗೆ ರಚಿಸಿರುವ ಸಕ್ಷಮ ಪ್ರಾಧಿಕಾರದ ಕಾನೂನು ಅಧಿಕಾರಿಯನ್ನಾಗಿ ಪೊಲೀಸ್ ಇಲಾಖೆಯ ಪ್ರಧಾನ ಕಚೇರಿಯ ಹಿರಿಯ ಕಾನೂನು ಅಧಿಕಾರಿ ಸಿಂಗೆಚಾಂಗದೇವ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.
ಐಎಂಎಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯದಲ್ಲಿ ಸಕ್ಷಮ ಪ್ರಾಧಿಕಾರದ ಪರವಾಗಿ ಸಿಂಗೆಚಾಂಗದೇವ ವಾದ ಮಂಡಿಸಲಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಅವರನ್ನು ಸಕ್ಷಮ ಪ್ರಾಧಿಕಾರದ ಕಾನೂನು ಅಧಿಕಾರಿ ಹುದ್ದೆಗೆ ನೇಮಿಸಿ ಅಭಿಯೋಗ ಮತ್ತು ಸರ್ಕಾರ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.