ಬೆಂಗಳೂರು: ಗಾಯಕಿ ಲತಾ ಮಂಗೇಶ್ಕರ್ ನಿಧನದ ಕಾರಣ ಅವರ ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ.
ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಲತಾ ಮಂಗೇಶ್ಕರ್ ಅವರು ಭಾರತದ ನೈಟಿಂಗೆಲ್ ಆಗಿದ್ದರು. ಹಲವು ತಲೆಮಾರುಗಳ ಜನರ ಉಸಿರಿನ ಜೊತೆ ಲತಾ ಮಂಗೇಶ್ಕರ್ ಜೀವಂತವಾಗಿರುತ್ತಾರೆ. ದೇಶದ ಜನರ ಮನಸ್ಸಿನಲ್ಲಿ ಲತಾ ಮಂಗೇಶ್ಕರ್ ವಿಶೇಷ ಸ್ಥಾನ ಪಡೆದಿದ್ದಾರೆ’ ಎಂದಿದ್ದಾರೆ.
‘ಇಂಥ ಮಹಾನ್ ಗಾಯಕಿಯನ್ನು ನಾವು ಕಳೆದುಕೊಂಡಿದ್ದೇವೆ. ಲತಾ ನಿಧನದ ಗೌರವಾರ್ಥ ಕರ್ನಾಟಕದಲ್ಲಿ ಶೋಕಾಚರಣೆಗೆ ಆದೇಶಿಸಲಾಗಿದೆ’ ಎಂದು ಮುಖ್ಯಮಂತ್ರಿ ಸಾಂತ್ವನದ ನುಡಿಗಳನ್ನಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.