ಬೆಂಗಳೂರು:ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡ ಸಿ.ಪಿ.ಯೋಗೇಶ್ವರ್, ಎಚ್.ವಿಶ್ವನಾಥ್, ಭಾರತಿಶೆಟ್ಟಿ, ಶಾಂತಾರಾಮ ಸಿದ್ದಿ ಮತ್ತು ಪ್ರೊ.ಸಾಬಣ್ಣ ತಲವಾರ್ ಅವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದರು.
ವಿಧಾನಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ಬೋಧಿಸಿದರು. ಯೋಗೇಶ್ವರ್, ವಿಶ್ವನಾಥ್ ಮತ್ತು ತಳವಾರ ಸಾಬಣ್ಣ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರೆ, ಭಾರತಿ ಶೆಟ್ಟಿ ಭಾರತಮಾತೆ ಹೆಸರಿನಲ್ಲಿ ಮತ್ತು ಶಾಂತಾರಾಮ ಸಿದ್ದಿ ಬುಡಕಟ್ಟು ಕ್ರಾಂತಿಕಾರಿ ಹೋರಾಟಗಾರ ಬಿರ್ಸಾ ಮುಂಡಾ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.
ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಚ್.ವಿಶ್ವನಾಥ್, ಮೇಲ್ಮನೆಗೆ ನಾಮ ನಿರ್ದೇಶನಕ್ಕೆ ಅವಕಾಶ ನೀಡಿದ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಯಡಿಯೂರಪ್ಪ, ನಳಿನ್ ಕಟೀಲ್ ಮತ್ತು ಇತರರಿಗೆ ಧನ್ಯವಾದಗಳು. ಸರ್ಕಾರ ಕೊರೊನಾ ವಿರುದ್ಧ ಹೋರಾಡುತ್ತಿದೆ. ಆ ಕಾರ್ಯದಲ್ಲಿ ನಾವೂ ಕೈಜೋಡಿಸುತ್ತೇವೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.