ಹೊಸಪೇಟೆ:ಕುರಿಹಟ್ಟಿಯೊಂದರ ಮೇಲೆ ದಾಳಿ ನಡೆಸಿರುವ ಚಿರತೆ, ಕುರಿಯನ್ನು ಕಚ್ಚಿ ಸಾಯಿಸಿರುವ ಘಟನೆತಾಲ್ಲೂಕಿನ ಗುಂಡ್ಲುವದ್ದಿಗೇರಿ ಗ್ರಾಮದಲ್ಲಿಭಾನುವಾರ ಬೆಳಗಿನ ಜಾವ ನಡೆದಿದೆ.
ಕುರಿಹಟ್ಟಿಯು ಗ್ರಾಮದ ನಿವಾಸಿ ಹರಿಜನ ಕೆಂಚಪ್ಪ ಎಂಬುವರಿಗೆ ಸೇರಿದ್ದಾಗಿದೆ.
ಅರಣ್ಯ ಪ್ರದೇಶದ ಅಂಚಿನಲ್ಲಿ ಈ ಗ್ರಾಮವಿದೆ.ಆಗಾಗ, ಚಿರತೆ ದಾಳಿ ಮಾಡುತ್ತಿದೆ ಎನ್ನಲಾಗುತ್ತಿದೆ. ಕೆಲ ದಿನಗಳಿಂದ ಚಿರತೆಯ ಉಪಟಳ ಹೆಚ್ಚಾಗಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಅರಣ್ಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕುರಿಗಾಹಿಗಳು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.