ADVERTISEMENT

ಈಶ್ವರಪ್ಪಗೆ ಬೆದರಿಕೆ ಕರೆ: ದೂರು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2019, 20:00 IST
Last Updated 7 ಏಪ್ರಿಲ್ 2019, 20:00 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಶಿವಮೊಗ್ಗ: ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದರು.

‘‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಬಾಗಲಕೋಟೆಯಿಂದ ಚುನಾವಣೆ ಪ್ರಚಾರ ಮುಗಿಸಿ ರೈಲಿನ ಮೂಲಕ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಶುಕ್ರವಾರ ಸಂಜೆ 5.30ರ ಹೊತ್ತಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದೆ. ಉರ್ದು ಮಿಶ್ರಿತ ಭಾಷೆಯಲ್ಲಿ ನನ್ನೊಂದಿಗೆ ಏಕವಚನದಲ್ಲಿ ಮಾತನಾಡಿದ್ದಾರೆ. ‘ನೀನು ಬಿಜೆಪಿಯಿಂದ ಮುಸ್ಲಿಮರಿಗೆ ಏಕೆ ಎಂ.ಪಿ. ಟಿಕೆಟ್ ಕೊಡುವುದಿಲ್ಲ’ ಎಂದು ಕೇಳಿ, ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಪದೇ ಪದೇ ‘ಜೀವ ತೆಗೆಯುತ್ತೇನೆ’ ಎಂದು ಹೇಳಿದ್ದಾರೆ’’ ಎಂದು ಆರೋಪಿಸಿದರು.

‘ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ನನಗೆ ಭದ್ರತೆ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.