ADVERTISEMENT

ಸಿಡಿಲು ಬಡಿದು ಏಳು ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 21:08 IST
Last Updated 22 ಏಪ್ರಿಲ್ 2021, 21:08 IST
ಚಿಂತಾಮಣಿ ತಾಲ್ಲೂಕಿನಲ್ಲಿ ಸೋಮಯಾಜಲಹಳ್ಳಿಯಲ್ಲಿ ಗುರುವಾರ ಸಿಡಿಲು ಬಡಿದು ಗಾಯಗೊಂಡಿರುವ ಒಂದೇ ಕುಟುಂಬದ ಸದಸ್ಯರು.
ಚಿಂತಾಮಣಿ ತಾಲ್ಲೂಕಿನಲ್ಲಿ ಸೋಮಯಾಜಲಹಳ್ಳಿಯಲ್ಲಿ ಗುರುವಾರ ಸಿಡಿಲು ಬಡಿದು ಗಾಯಗೊಂಡಿರುವ ಒಂದೇ ಕುಟುಂಬದ ಸದಸ್ಯರು.   

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಸೋಮಯಾಜಲಹಳ್ಳಿಯಲ್ಲಿ ಗುರುವಾರ ಮನೆಯೊಂದಕ್ಕೆ ಸಿಡಿಲು ಬಡಿದು ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಡಿಲಿನ ಹೊಡೆತಕ್ಕೆ ಮನೆ ನೆಲಸಮವಾಗಿದೆ. ಮನೆಯಲ್ಲಿದ್ದವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ತೀವ್ರ ಸುಟ್ಟ ಗಾಯಗಳಿಂದ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸಿಡಿಲು ಬಡಿದು ಸಾವು: ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಯಾದಲಡಕು ಗ್ರಾಮದ ಮಹಲಿಂಗಯ್ಯ (46) ಗುರುವಾರ ಮುಂಜಾನೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ADVERTISEMENT

ಮಳೆಗೆ ಮನೆ ಸೋರುತ್ತಿದ್ದ ಕಾರಣ, ಚಾವಣಿ ಮುಚ್ಚಲೆಂದು ಹೊರಬಂದಾಗ ಸಿಡಿಲು ಬಡಿದಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.