ADVERTISEMENT

ರಾಜ್ಯದಲ್ಲಿ ಮದ್ಯ ಮಾರಾಟ: ಮುಖ್ಯಮಂತ್ರಿ ನಿರ್ಧಾರವೇ ಅಂತಿಮ –ಆರ್. ಅಶೋಕ

​ಪ್ರಜಾವಾಣಿ ವಾರ್ತೆ
Published 2 ಮೇ 2020, 8:40 IST
Last Updated 2 ಮೇ 2020, 8:40 IST
   

ಬೆಂಗಳೂರು: ಮದ್ಯ ಮಾರಾಟ ವಿಷಯ ಮುಖ್ಯಮಂತ್ರಿ ಅವರ ಕೈಯಲ್ಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ಮುಖ್ಯಮಂತ್ರಿ ಅವರೊಂದಿಗಿನ ಸಭೆಯ ಬಳಿಕ ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 4ರಂದು ಯಾವ ವಲಯದಲ್ಲಿ ಮದ್ಯ ಮಾರಾಟ ನಡೆಸಬಹುದು ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ ಎಂದರು.

ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರು ನಗರವನ್ನು ಒಂದು ಘಟಕವಾಗಿ ನೋಡದೆ ನಾಲ್ಕು ವಲಯಗಳಾಗಿ ವಿಂಗಡಿಸಬೇಕು. ಕೊರೊನಾ ಸೋಂಕು ಅಧಿಕ ಇಲ್ಲದ ವಲಯಗಳಲ್ಲಿ ಚಟುವಟಿಕೆಯನ್ನು ಚುರುಕುಗೊಳಿಸಬೇಕು ಎಂಬ ಸಲಹೆ ನೀಡಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.