ಬೆಂಗಳೂರು: ರೈತರ ಸಾಲಮನ್ನಾ ಯೋಜನೆಗೆ ಚುನಾವಣಾ ಆಯೋಗ ತಡೆ ನೀಡಿದೆ.
ಲೋಕಸಭಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಯೋಜನೆ ಸ್ಥಗಿತಗೊಳಿಸುವಂತೆ ಆಯೋಗ ಇದೇ 11ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಸಹಕಾರ ಇಲಾಖೆ ಮೂಲಗಳು ಖಚಿತಪಡಿಸಿವೆ.
‘ಬ್ಯಾಂಕ್ ಖಾತೆಗಳಿಗೆ ಮಾರ್ಚ್ 10ರವರೆಗೆ ಸಾಲಮನ್ನಾ ಹಣ ವರ್ಗಾಯಿಸಲಾಗಿದೆ. ಚುನಾವಣೆ ಘೋಷಣೆ ಆಗಿರುವುದರಿಂದ ಈ ಪ್ರಕ್ರಿಯೆ ಮುಂದುವರಿಸಬಹುದೇ ಎಂದು ಅಭಿಪ್ರಾಯ ಕೇಳಿ ಆಯೋಗಕ್ಕೆ ಪತ್ರ ಬರೆಯಲಾಗಿತ್ತು’ ಎಂದು ಯೋಜನೆಯ ನೋಡಲ್ ಅಧಿಕಾರಿ ಮೌನಿಷ್ ಮೌದ್ಗಿಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.