ADVERTISEMENT

‘ಲಾಕ್‌ಡೌನ್‌: ಜನರ ಸಹಕಾರ ಆಧರಿಸಿ ನಿರ್ಧಾರ’

​ಪ್ರಜಾವಾಣಿ ವಾರ್ತೆ
Published 29 ಮೇ 2021, 20:38 IST
Last Updated 29 ಮೇ 2021, 20:38 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಂಗಳೂರು: ‘ಜೂನ್‌ 7ರವರೆಗಿನ ಕೋವಿಡ್‌ ಸ್ಥಿತಿಗತಿ ಅವಲೋಕಿಸಿ ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ತೀರ್ಮಾನಿಸಲಾಗುವುದು. ಜನರು ಸಹಕರಿಸಿದರೆ ಲಾಕ್‌ಡೌನ್ ಮುಂದುವರಿಸುವ ಪ್ರಶ್ನೆ ಉದ್ಭವಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಕೋವಿಡ್‌ ಪ್ರಕರಣಗಳು ಹೆಚ್ಚಿರುವ ಮೈಸೂರು, ಹಾಸನ, ಬೆಳಗಾವಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಶನಿವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಇದಕ್ಕೆ ಮುನ್ನ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ‘ಕೋವಿಡ್‌ ದೃಢ ಪ್ರಮಾಣ ಶೇ 10ಕ್ಕಿಂತ ಕಡಿಮೆ ಮಾಡಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾವಿನ ಪ್ರಮಾಣ ರಾಜ್ಯದಲ್ಲಿ ಶೇ 1.7ರಷ್ಟಿದ್ದು, ಅದನ್ನೂ ಕಡಿಮೆ ಮಾಡಬೇಕು’ ಎಂದು ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.